ಕುದುರೆ ಮೇಲೆ ಕೂರಿಸದ ಬಾಲಕನ ಕೊಲೆ, ಮೂವರ ಬಂಧನ

ಬೆಂಗಳೂರು: ಕುದುರೆ ಮೇಲೆ ಕೂರಿಸದ ಬಾಲಕನ ಕೊಲೆ, ಮೂವರ ಬಂಧನ.

ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕಳೆದ ಏ. 3ರಂದು ಕೆ.ಜಿ.ಹಳ್ಳಿ ರೈಲ್ವೆ ಹಳಿ ಬಳಿ ಈ ಕೊಲೆ ನಡೆದಿತ್ತು. ಮಾಸ್ಕ್​ ರಸ್ತೆಯಲ್ಲಿ ಬಾಲಕ ಸತೀಶ್ ಕುದುರೆ ಇಟ್ಟುಕೊಂಡಿದ್ದು, ಮಕ್ಕಳನ್ನು ಅದರ ಮೇಲೆ ಕೂರಿಸಿ ಆಡಿಸುತ್ತಿದ್ದ. ಕುದುರೆ ಮೇಲೆ ಸವಾರಿ ಮಾಡಲು ಸುಹೇಲುಲ್ಲಾ ಷರೀಫ್ ಬಂದಿದ್ದಾಗ ಸತೀಶ್ ದೊಡ್ಡವರನ್ನೆಲ್ಲ ಕುದುರೆ ಮೇಲೆ ಕೂರಿಸುವುದಿಲ್ಲ ಎಂದು ಹೇಳಿದ್ದ. ಆಗ ಆತ ಬಾಲಕನ ಕೆನ್ನೆಗೆ ಹೊಡೆದು ಹೋಗಿದ್ದ.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

ಹತ್ಯೆಯಾದ ಬಾಲಕ ಸತೀಶ್ ಕೆಲ ದಿನಗಳ ಬಳಿಕ ಹೊಟೇಲೊಂದರ ಬಳಿ ಷರೀಫ್​ನನ್ನು ನೋಡಿದ್ದ ಬಾಲಕ ಸತೀಶ್ ಮತ್ತು ಸ್ನೇಹಿತರು ಸೇರಿ ಷರೀಫ್ ಮೇಲೆ ಹಲ್ಲೆ ಮಾಡಿದ್ದರು. ಈ ಹಲ್ಲೆಗೆ ಪ್ರತಿಕಾರವಾಗಿ ಸತೀಶ್ ಕೊಲೆಗೆ ಈ ಷರೀಫ್ ಸಂಚು ಹೂಡಿದ್ದ ಎನ್ನಲಾಗಿದೆ. ಏಪ್ರಿಲ್ 3ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸತೀಶ್​ನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೊಣ್ಣೆಗಳಿಂದ ಹೊಡೆದು ಆರೋಪಿಗಳು ಕೊಲೆ ಮಾಡಿದ್ದರು. ಸುಮಾರು 60 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *