
ನಂದಿನಿ ಮೈಸೂರು
ವಿಜಯನಗರ:
ಎತ್ತಣ, ಮಾಮರ.. ಎತ್ತಣ ಕೋಗಿಲೆ ಎತ್ತಿಂದೆತ್ತ ಸಂಬಂಧವಯ್ಯ ಅನ್ನೋ ನಾನ್ ನುಡಿ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಲ್ಜಿಯಂ ಕನ್ಯೆ, ವಿಶ್ವವಿಖ್ಯಾತ ಹಂಪಿಯ ಯುವಕ ಅನಂತರಾಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದಾರೆ. ಹಿಂದೂ ಸಂಪ್ರದಾಯದಂತೆ ಆಟೋ ಚಾಲಕನ ಕೈ ಹಿಡಿದಿರೋ ವಿದೇಶಿ ಕನ್ಯೆ ಕೆಮಿಲ್ ಮದುವೆಗೆ ಇಡೀ ಕುಟುಂಬಸ್ಥರು ಸಾಕ್ಷಿಯಾಗಿದ್ದು, ಹಿಂದು ಸಂಪ್ರದಾಯದಂತೆ ಪರಸ್ಪರ ಹಾರ ಬದಲಿಸಿದುವೆ ಆಗಿದ್ದಾರೆ. ಉಭಯ ಜೋಡಿಗೆ ಅಕ್ಷತೆ ಉಗ್ಗಿ ಜನ ಸಂಭ್ರಮಿಸಿದ್ರು.
ಆಟೋರಾಜ ಅನಂತರಾಜು ಕೈಹಿಡಿದ ಬೆಲ್ಜಿಯಂ ಕನ್ಯೆ ಕೆಮಿಲ್..!
ಹಿಂದೂ ಸಂಪ್ರದಾಯದಂತೆ ಅದ್ದೂರಿ ಮಾದುವೆಯಾದ ನವಜೋಡಿ..!
ಇಬ್ಬರ ಪ್ರೇಮ ವಿವಾಹಕ್ಕೆ ಸಾಕ್ಷಿಯಾದ ಉಭಯ ಕುಟುಂಬಸ್ಥರು…!
ವಾ/ಒ-01- ಈ ಮುದ್ದು ಮುಕದ ಚೆಲುವೆ ಹೆಸರು ಕೆಮಿಲ್, ಆಟೋ ಚಾಲಕನ ಹೆಸರು ಅನಂತರಾಜು. ಕೆಮಿಲ್ ಬೆಲ್ಜಿಯಂ ದೇಶದವಳಾದ್ರೆ, ಅನಂತರಾಜು ಹಂಪಿಯ ನಿವಾಸಿ. ಇಬ್ಬರು ಪರಸ್ಪರ ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಸಪ್ತಪದಿ ತುಳಿದಿದ್ದಾರೆ. ನಿನ್ನೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದ ಈ ಜೋಡಿ ಇಂದು ಮುಂಜಾನೆ 8:30 ರಿಂದ 9:30ರ ಕುಂಭ ಶುಭ ಮುಹೂರ್ತದಲ್ಲಿ ಹಂಪಿಯ ವಿರೂಪಾಕ್ಷೇಶ್ವರನ ಸನ್ನಧಿಯಲ್ಲಿ ಉಭಯ ಕುಟುಂಬಸ್ಥರ ಸಮಕ್ಷಮದಲ್ಲಿ ಪ್ರೇಮಿಗಳು ಮದುವೆ ಆಗಿದ್ದಾರೆ.
ಅನಂತರಾಜು ಆಟೋ ಚಾಲಕ ಹಾಗೂ ಹಂಪಿ ಮಾರ್ಗ ದರ್ಶಿಯಾಗಿ ವಿಜಯನಗರದ ಗತವೈಭವವನ್ನು ಪ್ರವಾಸಿಗರಿಗೆ ಉಣಬಡಿಸ್ತಾನೆ. ಇತ್ತ ಬೆಲ್ಜಿಯಂ ಕನ್ಯೆ ಕೆಮಿಲ್ ಸೋಷಿಯಲ್ ವರ್ಕರ್. ಕಳೆದ ನಾಲ್ಕೈದು ವರ್ಷದ ಹಿಂದೆ ಜೀಪ್ ಫಿಲಿಪ್ಪೆ ಕುಟುಂಬ ಸಮೇತ ಹಂಪಿ ಗತವೈಭವ ಅರೆಯಲು ಬಂದಿರ್ತಾರೆ. ಜೀಮ್ ಫಿಲಿಪ್ಪೆ ಪರಿವಾರಕ್ಕೆ ಹಂಪಿಯಲ್ಲಿ ಆಟೋ ಚಾಲಕ ಅನಂತರಾಜುವಿನ ಪರಿಚಯ ಆಗುತ್ತೆ. ಅನಂತರಾಜು ಪ್ರಾಮಾಣಿಕ ಆಟೋ ಚಾಲಕ ಎನ್ನುವುದರೊಂದಿಗೆ ಉತ್ತಮ ಮಾರ್ಗದರ್ಶಕ ಆಗಿಯೂ ಅವರ ಮನಗೆದ್ದಿದ್ದಾನೆ. ಮರಿಯನ್ನೇ ಜೀಮ್ ಫಿಲಿಪ್ಪೆ ಅವರ ತೃತೀಯ ಸುಪುತ್ರಿ ಕೆಮಿಲ್ ಹಂಪಿಯ ನಿಸರ್ಗದ ಸೊಬಗಿಗೆ ಮನಸೋತಿದ್ದಾರೆ. ದಿನ ಕಳೆದಂತೆ ಕೆಮಿಲ್ ಅವರ ಪರಿವಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಮಾರ್ಗದರ್ಶಕ ಅನಂತರಾಜುವಿನ ಮೇಲೆ ಯುವತಿ ಕೆಮಿಲ್ ಪ್ರೇಮ ಅರಳಿದೆ. ಈ ಮಧ್ಯೆ ಇಬ್ಬರೂ ಬೇರೆ ಬೇರೆ ದೇಶದಲ್ಲಿದ್ರೂ ಪ್ರೀತಿ ಮಾತ್ರ ಕಡಿಮೆ ಆಗಿರಲಿಲ್ಲ. ಅದರಂತೆ ಇಂದು ಮದುವೆ ಆಗಿ ಎಲ್ಲ ಗಮನ ಸೆಳೆದಿದ್ದಾರೆ.
ಇನ್ನೂ, ಮೂರು ವರ್ಷದ ಹಿಂದೆಯೇ ಪ್ರೇಮದ ವಿವಾಹವಾಗಬೇಕಿದ್ದ ಜೋಡಿಗೆ ಕೊರೊನಾ ಮಹಾಮಾರಿ ತಡೆಯೊಡ್ಡಿತ್ತು. ಕೆಮಿಲ್ ಕುಟುಂಬದವರಿಗೆ ಮಗಳ ವಿವಾವಹನ್ನು ಬೆಲ್ಜಿಯಂ ದೇಶದಲ್ಲಿ ಅದ್ದೂರಿ ವೈಭವದೊಂದಿಗೆ ಮಾಡಬೇಕೆಂಬ ಮನಸ್ಸಿದ್ದರೂ, ಹಿಂದೂ ಸಂಪ್ರದಾಯದಂತೆ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳಬೇಕೆಂಬ ಯುವಕನ ಆಸೆಗೆ ಸಹಮತ ಸೂಚಿಸಿ, ಕೆಮಿಲ್ ಕುಟುಂಬಸ್ಥರು 50ಕ್ಕೂ ಅಧಿಕ ಜನ ಬೆಲ್ಜಿಯಂ ದೇಶದಿಂದ ಆಗಮಿಸಿ ಅಳಿಯ ಅನಂತರಾಜು, ಪುತ್ರಿ ಕೆಮಿಲ್ ಗೆ ಆಶೀರ್ವಧಿಸಿದ್ದಾರೆ.
ಒಟ್ಟಿನಲ್ಲಿ, ಹಣೆ ಬರಹ ಕೂಡಿ ಬಂದ್ರೆ ಹಡೆದ ತಾಯಿಗೂ ಕೇಳಬೇಕಿಲ್ಲ ಅನ್ನೋ ಹಾಗೇ, ವಿದೇಶದಿಂದ ಬಂದು ಹಂಪಿಯ ಯುವಕನಿಗೆ ಮಗಳ ಇಚ್ಚೆಯಂತೆ ಕೆಮಿಲ್ ಳನ್ನ ಪೋಷಕರು ಧಾರೆ ಎರೆದು ಕೊಟ್ಟಿದ್ದಾರೆ. ಪ್ರೇಮಿಗಳ ಮದುವೆಗೆ ಆಗಮಿಸಿದ್ದ ನೂರಾರು ಜನ ಗ್ರಾಮಸ್ಥರು ಅಕ್ಷತೆ ಹಾಕಿ ನವ ಜೋಡಿಗೆ ಹರಸಿದ್ರೆ, ಇತ್ತ ಕೆಮಿಲ್ ಕುಟುಂಬಸ್ಥರು ಭಾರತೀಯ ಸಂಪ್ರದಾಯದಂತೆ ಸೀರೆ ಉಟ್ಟು, ಹಣೆಗೆ ಕುಂಕುಮ ಇಟ್ಟು, ಕೈಗೆ ಬಳೆ ತೊಟ್ಟು ಎಲ್ಲರ ಗಮನ ಸೆಳೆದ್ರು.