ಶ್ರೀ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮಿಗಳಿಂದ ಪೋಸ್ಟರ್ ಬಿಡುಗಡೆ

ಶ್ರೀ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮಿಗಳಿಂದ ಪೋಸ್ಟರ್ ಬಿಡುಗಡೆ

ಫೆ.14 ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ

ಮೈಸೂರು: ನಗರದ ಕಾಳಿದಾಸ ರಸ್ತೆಯಲ್ಲಿರುವ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ
ಮೇಲುಕೋಟೆಯ ಶ್ರೀ ಯದುಗಿರಿ ಯತಿರಾಜ ಮಠದ ಪೀಠಾಧಿಪತಿಗಳಾದ
ಶ್ರೀ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮಿಗಳಿಂದ ಇದೇ ತಿಂಗಳು 14 ರಂದು ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ
ಮಹರ್ಷಿ ಪಬ್ಲಿಕ್ ಶಾಲೆ ಇಂಡಸ್ಟ್ರಿಯಲ್ ಸಬರ್ಬ್, ವಿಶ್ವೇಶ್ವರ ನಗರ, ನಡೆಯಲಿರುವ
ಉಚಿತವಾಗಿ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆಯ ಪೋಸ್ಟರ್ ವನ್ನು ಶ್ರೀ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮಿಗಳು ಬಿಡುಗಡೆಗೊಳಿಸಿ ಶುಭ ಹಾರೈಸಿದರು ,
ನಂತರ ಕಾರ್ಯಕ್ರಮದ ವಿವರವನ್ನು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಎಲ್ಲಾ ಜನಾಂಗದವರಿಗೂ ಉಚಿತ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಫೆ.14.ರ ಬುಧವಾರ ಬೆಳಗ್ಗೆ 8 ರಿಂದ 10:30 ರವರಿಗೂ ಮಹರ್ಷಿ ಪಬ್ಲಿಕ್ ಶಾಲೆ ಇಂಡಸ್ಟ್ರಿಯಲ್ ಸಬರ್ಬ್, ವಿಶ್ವೇಶ್ವರ ನಗರ, ನಡೆಯಲಿದೆ.
ಅಕ್ಷರಭ್ಯಾಸನವನ್ನು ಮಾಡಲಿಚ್ಚಿಸುವ ಮಕ್ಕಳ ಪೋಷಕರು ದೂರವಾಣಿ 9880752727/7829067769 ನೋಂದಾಯಿಸಿಕೊಳ್ಳಬಹುದು. ಅಕ್ಷರಭ್ಯಾಸ ಮಾಡಿಸುವವರ ಗಮನಕ್ಕೆ ಪ್ಲೇಟ್-ಬಳಪ ನಮ್ಮ ಟ್ರಸ್ಟ್ ವತಿಯಿಂದ ಉಚಿತವಾಗಿ ಪ್ರಸಾದ ರೂಪದಲ್ಲಿ ನೀಡಲಾಗುವುದು, ಪ್ರತ್ಯೇಕವಾಗಿ ತರುವ ಅಗತ್ಯವಿರುವುದಿಲ್ಲ. 13.ರಂದು ನೋಂದಣಿಗೆ ಕಡೆಯದಿನವಾಗಿದೆ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ
ಮೇಲುಕೋಟೆಯ ಚೆಲುವರಾಯಸ್ವಾಮಿ ದೇವಸ್ಥಾನದ ಪ್ರಥಮ ಸ್ಥಾನಿಕರು ಕೆ ಎಸ್ ನಾರಾಯಣ ಅಯ್ಯಂಗಾರ್, ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಆರ್ ಯೋಗ ನರಸಿಂಹನ್ (ಮುರಳಿ), ಪುಟ್ಟಸ್ವಾಮಿ, ಹೆಚ್ ವಿ ಎಲ್ ಎನ್ ಆಚಾರ್, ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಕೃಷ್ಣಮೂರ್ತಿ, ಹಾಗೂ ಇನ್ನಿತರರು ಹಾಜರಿದ್ದರು

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *