
ಶಿವಮೊಗ್ಗ: ನವವಿವಾಹಿತೆ ನವ್ಯಶ್ರೀ ನೇಣಿಗೆ ಶರಣು.

ನವವಿವಾಹಿತೆ ಣಾಗಿರುವ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ನವ್ಯಶ್ರೀ (23) ನೇಣಿಗೆ ಶರಣಾದ ದುರ್ದೈವಿ.
ಶಿವಮೊಗ್ಗ ಅಶ್ವಥ್ ನಗರದ ಮನೆ ಬಳಿ ಕಾರ್ ಶೆಡ್ ನಲ್ಲಿ ರಾತ್ರಿ ನವಶ್ರೀ ನೇಣಿಗೆ ಶರಣಾಗಿದ್ದಾಳೆ. 5 ತಿಂಗಳ ಹಿಂದೆಯಷ್ಟೇ ಆಕಾಶ್ ಎಂಬುವರನ್ನು ವಿವಾಹವಾಗಿದ್ದ ನವ್ಯಶ್ರೀ ಕೆಲವು ರೀಲ್ಸ್ ಮೂಲಕ ಹೆಸರುವಾಸಿಯಾಗಿದ್ದಳು.
ನಗರದ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಸೊಸೆಯಾಗಿರುವ ನವ್ಯಶ್ರೀ ನಿನ್ನೆ ರಾತ್ರಿ ತುಳಸಿ ಪೂಜೆ ಮಾಡಿ, ಅರಿಸಿನ ಕುಂಕುಮ ಕೂಡ ಸ್ವೀಕರಿಸಿ, ಬಂದಿದ್ದಳು.
ಬಳಿಕ ಕಾರ್ ಶೆಡ್ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನವ್ಯಶ್ರೀ ಕುಟುಂಬಸ್ಥರ ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.