ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಪುಸ್ತಕ ವಿತರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಪುಸ್ತಕ ವಿತರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ಪುಸ್ತಕ, ಲೇಖನಿ ಸಾಮಗ್ರಿಗಳು, ಹಣ್ಣುಗಳನ್ನು ವಿದ್ಯಾರಣ್ಯಪುರಂನಲ್ಲಿರುವ ಸಾರ್ವಜನಿಕ ಸುಬ್ಬಣ್ಣ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ನೀಡುವ ಮುಖಾಂತರ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷರಾದ ಎಸ್ ಪ್ರಕಾಶ್ ಪ್ರಿಯಾದರ್ಶನ ರವರು ಮಕ್ಕಳಿಗೆ ಪ್ರತಿದಿನ ಆಯಾ ದಿನದ ಪಾಠಗಳನ್ನು ಚೆನ್ನಾಗಿ ಓದಿ ಅರ್ಥೈಸಿಕೊಂಡು ಪ್ರತಿಭಾನ್ವಿತ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಬೇಕು ಹಾಗೂ ಪರಿಸರದ ಬಗ್ಗೆ ಕಾಳಜಿ ವಹಿಸಿ ತಮ್ಮ ಮತ್ತು ತಮ್ಮ ಕುಟುಂಬಗಳ ಹುಟ್ಟುಹಬ್ಬ ಇನ್ನಿತರ ವಿಶೇಷ ದಿನಗಳಲ್ಲಿ ಒಂದೊಂದು ಗಿಡವನ್ನು ನೆಡುವ ಮುಖಾಂತರ ಪರಿಸರ ಸಂರಕ್ಷಣೆ ಮಾಡಬೇಕೆಂದು ತಿಳಿಸಿದರು ಶಾಲೆಯ ಬಿಡಿವಿನ ಸಮಯದಲ್ಲಿ ಹೂ ತೋಟ ಕ್ರೀಡೆ, ಸಂಗೀತ,ಇನ್ನಿತರ ವಿಷಯಗಳ ಬಗ್ಗೆ ಸದಾಭಿರುಚಿಯನ್ನು ಬೆಳೆಸಿಕೊಳ್ಳಬೇಕು.ಉತ್ತಮ ನಡತೆಯುಳ್ಳವರಾಗಬೇಕು, ಉತ್ತಮ ಅಧಿಕಾರಿಗಳಾಗಿ, ನ್ಯಾಯವಾದಿಗಳಾಗಿ, ನ್ಯಾಯಾಧೀಶರಾಗಿ, ಡಾಕ್ಟರ್ ಗಳಾಗಿ, ಇಂಜಿನಿಯರ್ ಗಳಾಗಬೇಕಾದರೆ ಬುದ್ಧಿ, ತಿಳುವಳಿಕೆ, ಜ್ಞಾನವೇ ಮುಖ್ಯ ಈ ಜ್ಞಾನಾರ್ಜನೆ ಆಗಬೇಕಾದರೆ ವಿದ್ಯಾರ್ಥಿಗಳಾದ ತಾವುಗಳು ಓದುವ ಸಮಯದಲ್ಲಿ ಉಪಾಧ್ಯಾಯರು ಪಾಠ ಮಾಡುವಾಗ ಏಕಾಗ್ರತೆಯಿಂದ ಆಲಿಸಿ ಕಲಿತು ತಂದೆ ತಾಯಿ ಹಾಗೂ ಸಮಾಜಕ್ಕೆ ಕೀರ್ತಿ ತರಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷರಾದ ಎಸ್ ಪ್ರಕಾಶ್ ಪ್ರಿಯಾದರ್ಶನ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಹೋಮದೇವ, ಹೊಯ್ಸಳ ಕರ್ನಾಟಕ ಸಂಘದ ಕಾರ್ಯದರ್ಶಿ ರಂಗನಾಥ್, ಕೆ ಆರ್ ನಗರದ ಎಲ್ಲರ ಪ್ರಮೋದ್,ಸುಬ್ರಮಣಿ, ಛಾಯಾ, ಯಶವಂತ್ ಕುಮಾರ್, ಮಹದೇವ್, ಮಹೇಶ್, ಎಸ್‌.ಪಿ. ಅಕ್ಷಯ ಪ್ರಿಯಾದರ್ಶನ್,,ಶ್ರೀಧರ್, ಪುನೀತ್, ಅಭಿಷೇಕ್, ಇನ್ನಿತರರು ಉಪಸ್ಥಿತರಿದ್ದರು

ವರದಿ :ನಂದಿನಿ ಮೈಸೂರು

https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

Leave a Reply

Your email address will not be published. Required fields are marked *